ನಮಸ್ಕಾರ...!

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು!!!


ರಚನೆ: ಹುಯಿಗೋಳ ನಾರಾಯಣ ರಾವ್, ಸಂಗೀತ: ಪಿ. ಕಾಳಿಂಗ ರಾವ್

ಈ ತಾಣದಲ್ಲಿ ತಮಗೆ,

ಕನ್ನಡದ ಮೇರು ಕೃತಿಗಳ ಆಯ್ದ ಕೆಲವು ಭಾಗಗಳು, ಕನ್ನಡ ನಾಡು, ನುಡಿ, ಜಲ,ಪರಿಸರ ಸೊಬಗು ಇತ್ಯಾದಿಗಳ ವಿಶ್ಲೇಷಣೆ, ಕನ್ನಡ ಜನ, ಭಾಷೆ, ಸಂಸ್ಕೃತಿ,ಸಾಹಿತ್ಯ,ಸಂಗೀತ,ಪರಂಪರೆಗಳ ಕಿರು ಪರಿಚಯಗಳು,
ಭೌತಿಕ, ಆಧ್ಯಾತ್ಮಿಕ ವಿಷಯಗಳು


ಸವಿಯಲು ದೊರೈಯುತ್ತದೆ !!!

..ಜೊತೆಗೆ ನನ್ನ ಕೆಲವು ವಯಕ್ತೀಕ ಅಭಿಪ್ರಾಯಗಳು!!


ಸಿರಿಗನ್ನಡಂ ಗೆಳ್ಗೆ ಸಿರಿಗನ್ನಡಂ ಬಾಳ್ಗೆ!!

Sunday, 30 November 2008

ಸ್ವರ್ಗ ನರಕ..!

ದೇವಲೋಕ, ಮರ್ತ್ಯಲೋಕವೆಂಬುದು ಬೇರಿಲ್ಲ, ಕಾಣಿಭೋ
ಸತ್ಯವ ನುಡಿವುದೇ ದೇವಲೋಕ, ಮಿಥ್ಯವ ನುಡಿವುದೇ ಮರ್ತ್ಯಲೋಕ
ಆಚಾರವೇ ಸ್ವರ್ಗ, ಆನಾಚಾರವೆ ನರಕ ಕೂಡಲ ಸಂಗಮದೇವಾ, ನೀವೇ ಪ್ರಮಾಣ
- ಬಸವಣ್ಣ

ತಾತ್ಪರ್ಯ: ದೇವಲೋಕ, ಭೂಲೋಕ ಎಂಬುವುಗಳು ಮತ್ತೆ ಬೇರೆ ಇಲ್ಲ. ಸತ್ಯವ ಮಾತನಾಡುವುದೇ ದೇವಲೋಕ, ಸುಳ್ಳು ಮಾತನಾಡುವುದೇ ಭೂಲೋಕ. ಒಳ್ಳೆ ಆಚಾರವೇ ಸ್ವರ್ಗ (ಸುಖ), ದುರಾಚಾರವೇ ನರಕ (ಕಷ್ಟ) ಕೂಡಲ ಸಂಗಮದೇವಾ ಇದಕ್ಕೆ ನೀವೇ ಪ್ರಮಾಣ.

No comments: