ತಾಳ: ಆಟ
ರಾಗ: ಪಂತುವರಾಳಿ
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯೆನೇದಾರು ಬಲ್ಲಿರಾ
ಹುಟ್ಟದ ಯೋನಿಗಳಿಲ್ಲ, ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟುಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಙ್ನನ ನೆನೆ ಕಂಡ್ಯ ಮನುಜ ||೧||
ಜಲವೆ ಸಕಲ ಕುಲಕ್ಕೆ ತಾಯಿಯಲ್ಲವೆ ಆ
ಜಲದ ಕುಲವೇನಾದರು ಬಲ್ಲಿರಾ
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯನರಿತು ನೀ ಹರಿಯ ನೆನೆ ಮನುಜ ||೨||
ಹರಿಯೆ ಸರ್ವೋತ್ತಮ, ಹರಿಯೆ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿಕೇಶವರಾಯನ
ಚರಣಕಮಲವನು ಕೀರ್ತಿಸುವನೆ ಕುಲಜ ||೩||
- ಕನಕದಾಸರು
ನಮಸ್ಕಾರ...!
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು!!!
ರಚನೆ: ಹುಯಿಗೋಳ ನಾರಾಯಣ ರಾವ್, ಸಂಗೀತ: ಪಿ. ಕಾಳಿಂಗ ರಾವ್
ಈ ತಾಣದಲ್ಲಿ ತಮಗೆ,
ಕನ್ನಡದ ಮೇರು ಕೃತಿಗಳ ಆಯ್ದ ಕೆಲವು ಭಾಗಗಳು, ಕನ್ನಡ ನಾಡು, ನುಡಿ, ಜಲ,ಪರಿಸರ ಸೊಬಗು ಇತ್ಯಾದಿಗಳ ವಿಶ್ಲೇಷಣೆ, ಕನ್ನಡ ಜನ, ಭಾಷೆ, ಸಂಸ್ಕೃತಿ,ಸಾಹಿತ್ಯ,ಸಂಗೀತ,ಪರಂಪರೆಗಳ ಕಿರು ಪರಿಚಯಗಳು,
ಭೌತಿಕ, ಆಧ್ಯಾತ್ಮಿಕ ವಿಷಯಗಳು
ಸವಿಯಲು ದೊರೈಯುತ್ತದೆ !!!
..ಜೊತೆಗೆ ನನ್ನ ಕೆಲವು ವಯಕ್ತೀಕ ಅಭಿಪ್ರಾಯಗಳು!!
ಸಿರಿಗನ್ನಡಂ ಗೆಳ್ಗೆ ಸಿರಿಗನ್ನಡಂ ಬಾಳ್ಗೆ!!
Sunday 14 December 2008
Subscribe to:
Post Comments (Atom)
No comments:
Post a Comment