ರಾಗ: ಕೇದಾರಗೌಳ
ತಾಳ: ಅಟ
ದಾನ ಧರ್ಮವ ಮಾಡಿ ಸುಖಿಯಾಗು ಮನವೆ
ಹೀನ ವೃತ್ತಿಯಲಿ ನೇ ಕೆಡಬೇಡ ಮನವೆ
ಎಕ್ಕನಾತಿ ಎಲ್ಲಮ್ಮ ಮಾರಿ ದುರ್ಗಿ ಚೌಡಿಯರ
ಅಕ್ಕರಿಂದಲಿ ಪೂಜೆ ಮಾಡಲೇಕೆ
ಕಿಕ್ಕಿರಿದು ಯಮನ ದೂತರೆಳೆದೊಯ್ವಾಗ
ಶಕೇರು ಬಿಡಿಸಿಕೊಂಡಾರೇನು ಮರುಳೆ |೧|
ಸಂಭ್ರಮದಲೊಂಧ್ಹೊತ್ತು ನೇಮದಲಿದ್ದು
ತುಂಬಿಟ್ಟಿನಾ ದೀಪ ಹೊರಲೇತಕೆ
ಕೊಂಬು ಹೋತ ಕುರಿ ಕೋಣನಾ ಬಲಿಗೊಂಬ
ದೊಂಬಿ ದೈವಗಳ ಭಜಿಸದಿರು ಮನವೆ |೨|
ಚಿಗುರೆಲೆ ಬೇವಿನಸೊಪ್ಪು ನಾರಸೀರೆ
ಬಗೆಬಗೆಯಿಂದ ಶೃಂಗಾರ ಮಾಡಿ
ನೆಗೆನೆಗೆದು ಆಡಲು ಕುಣಿಯಲು ನಿನಗಿನ್ನು
ಮಿಗಿಲಾದ ಮುಕುತಿಯುಂಟೇ ಹುಚ್ಚು ಮನವೆ |೩|
ದಾನ-ಧರ್ಮ ಪರೋಪಕಾರವ ಮಾಡು
ದೀನನಾಗಿ ನೀ ಕೆಡಬೇಡವೋ
ಙಾನವಿಲ್ಲದೆ ಹೀನ ದೈವವ ಭಜಿಸಲು
ಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ ? |೪|
ನರಲೋಕದಿ ಯಮನ ಬಾಧೆಯ ಕಳೆಯಲು
ವರ ಪುಣ್ಯಕಥೆಗಳ ಕೇಳುತಲಿ
ಸಿರಿಯಾದಿಕೇಶವರಾಯನ ನೆರೆ ನಂಬಿ
ಸ್ಥಿರವಾದ ಪದವಿಯ ಪಡೆ ಹುಚ್ಚು ಮನವೆ |೫|
- ಕನಕದಾಸರು
ನಮಸ್ಕಾರ...!
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು!!!
ರಚನೆ: ಹುಯಿಗೋಳ ನಾರಾಯಣ ರಾವ್, ಸಂಗೀತ: ಪಿ. ಕಾಳಿಂಗ ರಾವ್
ಈ ತಾಣದಲ್ಲಿ ತಮಗೆ,
ಕನ್ನಡದ ಮೇರು ಕೃತಿಗಳ ಆಯ್ದ ಕೆಲವು ಭಾಗಗಳು, ಕನ್ನಡ ನಾಡು, ನುಡಿ, ಜಲ,ಪರಿಸರ ಸೊಬಗು ಇತ್ಯಾದಿಗಳ ವಿಶ್ಲೇಷಣೆ, ಕನ್ನಡ ಜನ, ಭಾಷೆ, ಸಂಸ್ಕೃತಿ,ಸಾಹಿತ್ಯ,ಸಂಗೀತ,ಪರಂಪರೆಗಳ ಕಿರು ಪರಿಚಯಗಳು,
ಭೌತಿಕ, ಆಧ್ಯಾತ್ಮಿಕ ವಿಷಯಗಳು
ಸವಿಯಲು ದೊರೈಯುತ್ತದೆ !!!
..ಜೊತೆಗೆ ನನ್ನ ಕೆಲವು ವಯಕ್ತೀಕ ಅಭಿಪ್ರಾಯಗಳು!!
ಸಿರಿಗನ್ನಡಂ ಗೆಳ್ಗೆ ಸಿರಿಗನ್ನಡಂ ಬಾಳ್ಗೆ!!
Saturday, 20 December 2008
Subscribe to:
Post Comments (Atom)
No comments:
Post a Comment